ಕಾಲ ಭೈರವ ಅಷ್ಟಕಂ ಶನಿಕಾಟ ನಿವಾರಣೆಗಾಗಿ ಕೆಟ್ಟ ಸಮಯ ಒಳ್ಳೆಯದಾಗಿ ಬದಲಾಗುತ್ತೆ!

ಕಾಲಭೈರವ ಅವತಾರವು ಶಿವನ ಭಯಭೀತಗೊಳಿಸುವ ಅವತಾವೆಂದೇ ಪರಿಗಣಿಸಲಾಗಿದೆ. ಈ ರೂಪದಲ್ಲಿ ಶಿವನು ಕ್ರೋಧದಿಂದ ಕೂಡಿರುತ್ತಾರೆ ಮತ್ತು ಎದುರಿಗೆ ಬಂದವರನ್ನು ದಹಿಸಿಬಿಡುತ್ತಾರೇನೋ ಎಂಬಂತಹ ರೀತಿಯಲ್ಲಿ ಮುಖದಲ್ಲಿ ಭಾವನೆಗಳನ್ನು ವ್ಯಕ್ತಪಡಿಸುತ್ತಿರುತ್ತಾರೆ.

ಕಾಲಭೈರವ ಎಂಬ ಹೆಸರಿನಲ್ಲಿ ಎರಡು ಅರ್ಥಗಳು ಅಡಗಿದ್ದು ಒಂದು ಭಯ ಭೀತಗೊಳಿಸುವ ದೇವರು ಭೈರವನ ಅರ್ಥವನ್ನು ಕಂಡುಕೊಂಡರೆ ಇನ್ನೊಂದೆಡೆ ಕಾಲ ಅಂದರೆ ಕಪ್ಪಿನ ಬಣ್ಣದ ದೇವರ ಅವತಾರವೆಂಬುದಾಗಿ ನಾವು ಗ್ರಹಿಸಿಕೊಳ್ಳಬಹುದಾಗಿದೆ. ಅಂತೆಯೇ ಸಮಯ ಮತ್ತು ಅದರ ಕಳೆದುಹೋಗುವಿಕೆಯನ್ನು ಕೂಡ ಕಾಲ ನಮಗೆ ತಿಳಿಸುತ್ತದೆ.

ಭೈರವ ಅಷ್ಟಮಿಯನ್ನು ಕೃಷ್ಣ ಪಕ್ಷದ ಅಷ್ಟಮಿಯಂದು ಆಚರಿಸಲಾಗುತ್ತದೆ. ಶಿವನು ಕಾಲಭೈರವನ ಅವತಾರವನ್ನು ಎತ್ತಿರುವುದು ಈ ಸಮಯಲ್ಲಿ ಎಂಬುದಾಗಿ ನಂಬಲಾಗಿದೆ. ಇದಕ್ಕನುಗುಣವಾಗಿ ಕಾಲಭೈರವನ ಭಕ್ತರು ವ್ರತವನ್ನು ಆಚರಿಸುತ್ತಾರೆ ಅಂತೆಯೇ ಭೈರವನ ದೇವಸ್ಥಾನಕ್ಕೆ ಭೇಟಿ ನೀಡುತ್ತಾರೆ. ಈ ಸಲುವಾಗಿ ನಾವು ನಿಮಗೆ ಕಾಲ ಭೈರವ ಮಂತ್ರವನ್ನು ಪ್ರಸ್ತುಪಡಿಸುತ್ತಿದ್ದೇವೆ. ದೇವಸ್ಥಾನಕ್ಕೆ ಹೋಗಿ ಈ ಮಂತ್ರವನ್ನು ಪಠಿಸಿದರೆ ಉತ್ತಮ ಫಲ ದೊರೆಯುತ್ತದೆ. ಶನಿ ದೋಷ ನಿವಾರಣೆಗೆ ಕಾಲಭೈರವ ಅಷ್ಟಕವನ್ನು ಒಂದು ಸರಿ ಆದರೂ ಜಪ ಮಾಡಬೇಕು.

Leave a Comment