‘ಜೆಡಿಎಸ್​ನವರು ಗೆದ್ದರೆ ಬಿಜೆಪಿಯವರಿಗೆ ಮಾರಾಟ ಆಗ್ತಾರೆ’

ಕೋಲಾರ: ಜೆಡಿಎಸ್ ಪಕ್ಷದವರು ಗೆದ್ದರೆ ಬಿಜೆಪಿಯವರಿಗೆ ಮಾರಾಟ ಆಗುತ್ತಾರೆ ಎಂದು ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ವಾಗ್ದಾಳಿ ನಡೆಸಿದ್ದಾರೆ. ‘ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ’ದ ಅಂಗವಾಗಿ ಕಾಂಗ್ರೆಸ್ ಪಾದಯಾತ್ರೆ ಹಮ್ಮಿಕೊಂಡಿದೆ. ಪಾದಯಾತ್ರೆ ವೇಳೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಟೇಕಲ್ ಗ್ರಾಮದಲ್ಲಿ ಕೆ.ವೈ.ನಂಜೇಗೌಡ ಮಾತನಾಡಿದ್ದಾರೆ.

ಜೆಡಿಎಸ್ ನಾಯಕರ ವಿರುದ್ಧ ಕಿಡಿಕಾರಿರುವ ನಂಜೇಗೌಡ, ‘ಈ ಹಿಂದೆಯೇ ಜೆಡಿಎಸ್ ನವರು ಬಿಜೆಪಿಯವರಿಗೆ ಮಾರಾಟವಾಗಿದ್ದರು. ಜೆಡಿಎಸ್ ಅವರಿಗೆ 20-25 ಸೀಟ್ ಬಂದ್ರೆ ಕತೆ ಮುಗೀತು. ಅವರು ಮತ್ತೆ ಬಿಜೆಪಿ ಜೊತೆ ಹೋಗ್ತಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ’ವೆಂದು ಹೇಳಿದ್ದಾರೆ.

ಇದನ್ನೂ ಓದಿ: ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ನೀಡಿದ ಸಚಿವ ಬಿ.ಸಿ.ನಾಗೇಶ್

ಬಿಜೆಪಿ ಮತ್ತು ಜೆಡಿಎಸ್ ಎರಡೂ ಒಂದೇ. ಇವು ಒಂದು ರೀತಿ ಒಂದು ನಾಣ್ಯದ ಎರಡು ಮುಖಗಳಿದ್ದಂತೆ. ಮತದಾರರು ದಯವಿಟ್ಟು ಎರಡೂ ಪಕ್ಷವನ್ನು ದೂರವಿಡಬೇಕು. ಮತ್ತೆ ಕಾಂಗ್ರೆಸ್ ಆಡಳಿತಕ್ಕೆ ಕೈಜೋಡಿಸಬೇಕು. ದೇಶ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಕೊಡಬೇಕೆಂದು ಅವರು ಹೇಳಿದ್ದಾರೆ.

ಭ್ರಷ್ಟ ಬಿಜೆಪಿಯನ್ನು ಜನರು ಅಧಿಕಾರದಿಂದ ಕಿತ್ತೊಗೆಯಲು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು. ಬಿಜೆಪಿಗೆ ಬೆಂಬಲಿಸುವ ಜೆಡಿಎಸ್ ಅನ್ನೂ ಮತದಾರರು ತಿರಸ್ಕರಿಸಬೇಕು. ದೇಶದ ಮತ್ತು ರಾಜ್ಯದ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕೆಂದು ಇದೇ ವೇಳೆ ನಂಜೇಗೌಡ ಹೇಳಿದ್ದಾರೆ.

ಇದನ್ನೂ ಓದಿ: Har Ghar Tiranga: ರಾಜ್ಯದ 1 ಕೋಟಿ ಮನೆಗಳಲ್ಲಿ ತ್ರಿವರ್ಣ ಧ್ವಜ ಹಾರಿಸುವ ಗುರಿ- ಸಿಎಂ ಬೊಮ್ಮಾಯಿ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ…
Android Link – https://bit.ly/3hDyh4G
Apple Link – https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.



Source link

Leave a Comment