ಸಿದ್ಧರಾಮೋತ್ಸವಕ್ಕೆ ಹೊರಟ ಕ್ರೂಸರ್ ಪಲ್ಟಿ, ಓರ್ವ ಸಾವು ನಾಲ್ವರಿಗೆ ಗಾಯ

ಬಾಗಲಕೋಟೆ: ಸಿದ್ಧರಾಮೋತ್ಸವಕ್ಕೆ ಹೊರಟ ಕ್ರೂಸರ್ ಪಲ್ಟಿಯಾಗಿದ್ದರಿಂದಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ ನಾಲ್ವರು ಗಾಯಗೊಂಡಿರುವ ಘಟನೆ ಬಾದಾಮಿ ತಾಲೂಕಿನ ಹೂಲಗೇರಿ ಸಮೀಪ ನಡೆದಿದೆ.ಮೃತಪಟ್ಟಿರುವ ಯುವಕನನ್ನು ಪ್ರಕಾಶ್ ಬಡಿಗೇರ್ ಎಂದು ತಿಳಿದುಬಂದಿದೆ.

ಈ ಮಾಹಿತಿ ಲಭ್ಯವಾದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಕೆರೂರು ಪೊಲೀಸ್ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.ಮೃತಪಟ್ಟಿರುವ ಪ್ರಕಾಶ್ ಬಡಿಗೇರ್ (34) ಮುಧೋಳ ತಾಲೂಕಿನ ಚಿಕ್ಕಾಲಗುಂಡಿ ಗ್ರಾಮವರು ಎನ್ನಲಾಗಿದೆ.ಇದೆ ವೇಳೆ ಗಾಯಗೊಂಡವರನ್ನು ಬಾಗಲಕೋಟೆಯ ಜಿಲ್ಲಾ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನೊಂದೆಡೆಗೆ ಈ ದುರ್ಘಟನೆಯ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. “ನನ್ನ ಹುಟ್ಟುಹಬ್ಬದ ಸಮಾರಂಭಕ್ಕಾಗಿ ದಾವಣಗೆರೆಗೆ ಆಗಮಿಸುತ್ತಿದ್ದ ಮುದೋಳ ತಾಲೂಕಿನ ಪ್ರಕಾಶ್ ಬಡಿಗೇರ್ ಎಂಬವರು ರಸ್ತೆ ಅಪಘಾತದಲ್ಲಿ‌ ಮೃತಪಟ್ಟ ಸುದ್ದಿ ತಿಳಿದು ಆಘಾತವಾಯಿತು.

ಮೃತ ಪ್ರಕಾಶ್ ಅವರ ಕುಟುಂಬದ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ.

ನನ್ನ ಹುಟ್ಟುಹಬ್ಬದ ಸಮಾರಂಭಕ್ಕಾಗಿ ದಾವಣಗೆರೆಗೆ ವಾಹನಗಳಲ್ಲಿ ಆಗಮಿಸುವವರು ಅನಗತ್ಯ ಧಾವಂತ ತೋರದೆ ಎಚ್ಚರಿಕೆಯಿಂದ ವಾಹನ ಚಲಾಯಿಸಿಕೊಂಡು ಬರಬೇಕೆಂದು ಕೈಮುಗಿದು ಮನವಿ ಮಾಡಿಕೊಳ್ಳುತ್ತಿದ್ದೇನೆ.

ನಿಮ್ಮ ಜೀವ ನಮಗೆ‌ ಮಾತ್ರವಲ್ಲ ನಿಮ್ಮನ್ನು ನಂಬಿರುವ ಕುಟುಂಬಕ್ಕೂ ಅಷ್ಟೇ ಅಮೂಲ್ಯ ಎಂಬ ಅರಿವಿರಲಿ” ಎಂದು ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ…
Android Link – https://bit.ly/3hDyh4G
Apple Link – https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 



Source link

Leave a Comment