ಸತತ ನಾಲ್ಕನೇ ಬಾರಿ ನಾಲ್ಕನೇ ಬಾರಿಯ ಅದೃಷ್ಟ ಪರೀಕ್ಷೆಗೆ ಇಳಿದಿರುವ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಬಿಜೆಪಿ ಸಂಸದ ಪಿ.ಸಿ.ಮೋಹನ್

ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಬಿಜೆಪಿ ಸಂಸದ ಪಿ.ಸಿ.ಮೋಹನ್ ಮೂರು ಬಾರಿ ಗೆಲುವು ಸಾಧಿಸಿದ್ದು ತಮ್ಮ ನಾಲ್ಕನೇ ಬಾರಿಯ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವನ್ನು ಶ್ಲಾಘಿಸಿ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರ ರೋಡ್‌ ಶೋ ಹಾಗೂ ಅವರ ಭೇಟಿ ಹಾಗೂ ಜೆಡಿಎಸ್ ಪಕ್ಷದ ಬೆಂಬಲದೊಂದಿಗೆ ಕರ್ನಾಕಟದ 28 ಸ್ಥಾನಗಳನ್ನು ಗೆಲ್ಲುವ ಸಂಕಲ್ಪ ಮಾಡಿದ್ದೇವೆ. ದೆಹಲಿಯಲ್ಲಿ ಬಿಜೆಪಿ ಅಧಿಕಾರಿಕ್ಕೆ ಬಂದ ನಂತರ, ಪ್ರಧಾನಿ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ದೇಶದ ಆರ್ಥಿಕತೆಯು ದೃಢವಾದ ಬೆಳವಣಿಗೆಯನ್ನು ಕಂಡಿದೆ, ಮೆಟ್ರೊ ಸೇವೆಗಳು, ನಿರ್ಗತಿಕರಿಗೆ ವಸತಿ, ಆಯುಷ್ಮಾನ್ ಭಾರತ್ ಅಡಿಯಲ್ಲಿ ಆರೋಗ್ಯ ಮತ್ತು ಇತರ ಹಲವಾರು ಯೋಜನೆಗಳಂತಹ ಉಪಕ್ರಮಗಳ ಮೂಲಕ ನಮ್ಮ ಕ್ಷೇತ್ರದ ಅಭಿವೃದ್ಧಿಗೆ ಅಪಾರವಾದ ಕೊಡುಗೆ ನೀಡಿದ್ದೇವೆ, ಆದರೆ, ಕಾಂಗ್ರೆಸ್ ಪಕ್ಷ ಬೆಂಗಳೂರು ಮಾತ್ರವಲ್ಲದೆ ದೇಶದಾದ್ಯಂತ ತನ್ನ ವಿಶ್ವಾಸಾರ್ಹತೆ ಕಳೆದುಕೊಂಡಿದೆ ಎಂದರು.

ಸದ್ಯ ಪ್ರಧಾನಿ ಮೋದಿ ಅವರು ತಂದಿರುವ ಯೋಜನೆಗಳನ್ನು ಜನರಿಗೆ ಸುಲಭವಾಗಿ ತಲುಪುವ ಹಾಗೆ ಮಾಡಿ. ಆ ಯೋಜನೆಗಳಿಂದ ಆಗುವ ಅನುಕೂಲದ ಬಗ್ಗೆ ತಿಳಿಸಿಕೊಟ್ಟು, ಜನರ ಏಳಿಗಾಗಿ ವರ ನೇತೃತ್ವದಲ್ಲಿ ಮತ್ತೊಮ್ಮೆ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರುವ ವಿಶ್ವಾಸದಲ್ಲಿರುವ ಪಿ.ಸಿ.ಮೋಹನ್ ಅವರು. ಎದುರಾಳಿಗಳು ಯಾರೇ ಇದ್ದರೂ ಅವರ ಅವಿರತ ಶ್ರಮದ ಬಗ್ಗೆ ಜನರ ಮೇಲೆ ವಿಶ್ವಾಸ ವಿಟ್ಟು ನಾಲ್ಕನೇ ಬಾರಿ ಗೆಲುವು ಸಾಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.

Leave a Comment