ಶೀಘ್ರದಲ್ಲಿಯೇ ಈ 4 ರಾಶಿಯವರ ಶುಕ್ರದೆಸೆ ಪ್ರಾರಂಭ.!ಭಾಗ್ಯಾಧಯ ಅಪಾರ ಧನ ಸಂಪತ್ತು ಪ್ರಾಪ್ತಿ!

Kannada Astrology :ನವಗ್ರಹಗಳಲ್ಲಿ ಶುಕ್ರ ಗ್ರಹವನ್ನು ಅತ್ಯಂತ ಶುಭ ಗ್ರಹ ಎಂದು ಕರೆಯಲಾಗುತ್ತದೆ. ಶುಕ್ರನ ಪ್ರತ್ಯೇಕ ರಾಶಿ ಪರಿವರ್ತನೇಗಳು ಕೂಡ ಜ್ಯೋತಿಷ್ಯ ಶಾಸ್ತ್ರದಲ್ಲಿ ಹೆಚ್ಚು ಪ್ರಾಮುಖ್ಯತೆಯನ್ನು ಪಡೆದುಕೊಳ್ಳುತ್ತವೆ.

ಮೇಷ ರಾಶಿ–ನಿಮ್ಮ ರಾಶಿಯಲ್ಲಿಯೇ ಬುಧ-ಶುಕ್ರರ ಮೈತ್ರಿಯಿಂದ ಲಕ್ಷ್ಮಿನಾರಾಯಣ ಯೋಗ ನಿರ್ಮಾಣಗೊಳ್ಳುತ್ತಿದ್ದು ಈ ಯೋಗ ನಿಮ್ಮ ಪಾಲಿಗೆ ಇದು ಅತ್ಯಂತ ಮಂಗಳಕರ ಸಾಬೀತಾಗಲಿದೆ. ಈ ಯೋಗ ನಿಮ್ಮ ರಾಶಿಯ ಲಗ್ನ ಭಾವದಲ್ಲಿ ರೂಪುಗೊಳ್ಳುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ವ್ಯಕ್ತಿತ್ವದಲ್ಲಿ ಹೊಸ ಹೊಳಪು ಕಾಣಿಸಲಿದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಆರ್ಥಿಕ ವೇದಿಕೆಯಲ್ಲಿ ಲಾಭದ ಎಲ್ಲಾ ಸಾಧ್ಯತೆಗಳು ಹೆಚ್ಚಾಗುತ್ತಿವೆ. ಗುರಿಯ ಮೇಲೆ ನಿಮ್ಮ ಗಮನ ಕೇಂದ್ರೀಕರಿಸುವ ಮೂಲಕ ನಿಮಗೆ ಹೆಚ್ಚಿನ ಲಾಭ ಸಿಗಲಿದೆ.ಈ ಅವಧಿಯಲ್ಲಿ ನಿಮಗೆ ಬಾಳ ಸಂಗಾತಿಯ ಬೆಂಬಲ ಸಿಗಲಿದೆ. ಇದಲ್ಲದೆ ಈ ಅವಧಿಯಲ್ಲಿ ಅವರ ಶ್ರೇಯೋಭಿವೃದ್ಧಿ ಕೂಡ ನೀವು ನೋಡುವಿರಿ. ಅವಿವಾಹಿತರಿಗೆ ವಿವಾಹ ಪ್ರಸ್ತಾಪಗಳು ಬರಲಿವೆ. ಇದಲ್ಲದೆ ಈ ಅವಧಿಯಲ್ಲಿ ನಿಮಗೆ ಅದೃಷ್ಟದ ಸಾಕಷ್ಟು ಬೆಂಬಲ ಕೂಡ ಸಿಗಲಿದೆ.    

ಮಿಥುನ ರಾಶಿ–ಮಿಥುನ ರಾಶಿಯ ಜಾತಕದವರ ಪಾಲಿಗೆ ಲಕ್ಷ್ಮಿ ನಾರಾಯಣ ಯೋಗ ಅತ್ಯಂತ  ಲಾಭದಾಯಕ ಸಾಬೀತಾಗಲಿದೆ. ಏಕೆಂದರೆ ನಿಮ್ಮ ಜಾತಕದ ಏಕಾದಶ ಭಾವದಲ್ಲಿ ಬುಧ ಗೋಚರಿಸಲಿದ್ದಾನೆ. ಇದನ್ನು ಧನಲಾಭ, ಸಹೋದರ-ಸಹೋದರಿಯರ ಸಂಬಂಧಕ್ಕೆ ಸಂಬಂಧಿಸಿದೆ. ಹೀಗಾಗಿ ಇದು ನಿಮ್ಮ ಪಾಲಿಗೆ ಅತ್ಯುತ್ತಮ ಸಾಬೀತಾಗಲಿದೆ. ಈ ಅವಧಿಯಲ್ಲಿ ನಿಮ್ಮ ಆರ್ಥಿಕ ಸ್ಥಿತಿ ಬಲಿಷ್ಠಗೊಳ್ಳಲಿದೆ. ಕುಟುಂಬದಲ್ಲಿ ಸಹೋದರ-ಸಹೋದರಿಯರ, ಗೆಳೆಯರ ಜೊತೆಗಿನ ಸಂಬಂಧ ಗಟ್ಟಿಗೊಳ್ಳಲಿದೆ.        

ಕರ್ಕ ರಾಶಿ–ಮಂಗಳ ಅಧಿಪತ್ಯದ ಮೇಷ ರಾಶಿಯಲ್ಲಿ ಬುಧ-ಶುಕ್ರ ಮೈತ್ರಿಯಿಂದ ರೂಪುಗೊಳ್ಳುತಿರುವ ಈ ಲಕ್ಷ್ಮಿ ನಾರಾಯಣ ಯೋಗ ನಿಮ್ಮ ವೃತ್ತಿ ಜೀವನ ಹಾಗೂ ವ್ಯಾಪಾರದ ದೃಷ್ಟಿಯಿಂದ ಅತ್ಯಂತ ಶುಭವಾಗಿರಲಿದೆ. ಏಕೆಂದರೆ ಈ ಯೋಗ ನಿಮ್ಮ ಜಾತಕದ ಕರ್ಮಭಾವದಲ್ಲಿ ರೂಪುಗೊಳ್ಳುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ನೌಕರಿಗೆ ಸಂಬಂಧಿಸಿದ ಅಡೆತಡೆಗಳು ದೂರಾಗಲಿವೆ, ಕಾರ್ಯಕ್ಷೇತ್ರದಲ್ಲಿ ಎದುರಾಳಿಗಳ ತಂತ್ರ ವಿಫಲವಾಗಲಿದೆ. ಇದಲ್ಲದೆ ಮಾರ್ಚ್ ತಿಂಗಳ ಅಕ್ಕಪಕ್ಕದಲ್ಲಿ ನೌಕರಿಯಲ್ಲಿ ನಿರತ ಈ ಜಾತಕದ ಜನರಿಗೆ ಪದೋನ್ನತಿಯ ಭಾಗಿ ಸಿಗುವ ಸಾಧ್ಯತೆ ಇದೆ. ಜೊತೆಗೆ ನಿಧಾನಗತಿಯಲ್ಲಿ ವ್ಯಾಪಾರ ನಡೆಯುತ್ತಿರುವ ವ್ಯಾಪಾರಿಗಳಿಗೆ ಅಪಾರ ಧನಲಾಭ ಪ್ರಾಪ್ತಿಯಾಗಲಿದೆ. ಈ ಅವಧಿಯಲ್ಲಿ ನಿಮಗೆ ನಿಮ್ಮ ತಂದೆಯ ಬೆಂಬಲ ಸಿಗಲಿದೆ. ಆದರೆ, ಪ್ರಸ್ತುತ ನಿಮ್ಮ ಮೇಲೆ ಶನಿಯ ಎರಡೂವರೆ ವರ್ಷಗಳ ಕಾಟ ನಡೆಯುತ್ತಿರುವ ಕಾರಣ ಆರೋಗ್ಯದ ಬಗ್ಗೆ ಕಾಳಜಿವಹಿಸಿ. ಇದಲ್ಲದೆ ಈ ಅವಧಿಯಲ್ಲಿ ನೀವು ಕೆಲ ತಪ್ಪು ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ. ಮಾನಸಿಕ ಒತ್ತಡ ಉಂಟಾಗುವ ಸಾಧ್ಯತೆ ಇದೆ.  

ಸಿಂಹ ರಾಶಿ–ಮೇಷ ರಾಶಿಯಲ್ಲಿ ರೂಪುಗೊಳ್ಳುತ್ತಿರುವ ಲಕ್ಷ್ಮಿ ನಾರಾಯಣ ಯೋಗ ಸಿಂಹ ರಾಶಿಯ ಜಾತಕದವರ ಪಾಲಿಗೆ ಅತ್ಯಂತ ಅನುಕೂಲಕರ ಸಾಬೀತಾಗಲಿದೆ. ಏಕೆಂದರೆ ಇದು ನಿಮ್ಮ ಗೋಚರ ಜಾತಕದ ಅದೃಷ್ಟ ಭಾವದಲ್ಲಿ ರೂಪುಗೊಳ್ಳಲಿದೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಅದೃಷ್ಟದ ಸಂಪೂರ್ಣ ಬೆಂಬಲ ಸಿಗಲಿದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸಿನ ಸಕಲ ಯೋಗಗಳು ನಿರ್ಮಾಣಗೊಂದು ನಿಮಗೆ ಅಪಾರ ಕಾರ್ಯಸಿದ್ಧಿ ಪ್ರಾಪ್ತಿಯಾಗಲಿದೆ. ಹೊಸ ಒಪ್ಪಂಗಗಳಿಗೆ ನೀವು ಸಹಿ ಹಾಕುವ ಸಾಧ್ಯತೆ ಇದೆ. ಕೆಲಸದ ನಿಮಿತ್ತ ಪ್ರವಾಸ ಕೈಗೊಳ್ಳುವ ಸಾಧ್ಯತೆ ಇದ್ದು, ಪ್ರವಾಸ ನಿಮ್ಮ ಪಾಲಿಗೆ ಲಾಭದಾಯಕ ಸಾಬೀತಾಗಲಿದೆ. ವಿದ್ಯಾರ್ಥಿಗಳ ಪಾಲಿಗೆ ಈ ಸಮಯ ಮಂಗಳ ಫಲದಾಯಿ ಸಾಬೀತಾಗಲಿದೆ. ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಯಶಸ್ಸು ಸಿಗಲಿದೆ. ಧಾರ್ಮಿಕ ಹಾಗೂ ಮಂಗಳ ಕಾರ್ಯಗಳಲ್ಲಿ ನೀವು ಪಾಲ್ಗೊಳ್ಳಬಹುದು.

Leave a Comment