ತಂದೆ ಸಿಎಂ ಆಗ್ಬೇಕು, ನಾನು ಅಸೆಂಬ್ಲಿ ಚುನಾವಣೆಗೆ ಸ್ಪರ್ಧಿಸಲ್ಲ: ನಿಖಿಲ್ ಕುಮಾರಸ್ವಾಮಿ!

ಮಂಡ್ಯ: ಮುಂಬರುವ ವಿಧಾನಸಭಾ ಚುನಾವಣೆಗೂ ಮುನ್ನವೇ ರಾಜ್ಯದಲ್ಲಿ ಸಿಎಂ ಗದ್ದುಗೆಯ ಸದ್ದು ಜೋರಾಗಿದೆ. ತಂದೆ ಎಚ್.ಡಿ.ಕುಮಾರಸ್ವಾಮಿಗಾಗಿ ನಿಖಿಲ್ ಕುಮಾರಸ್ವಾಮಿ ತಮ್ಮ ರಾಜಕೀಯ ಭವಿಷ್ಯವನ್ನೇ ತ್ಯಾಗ ಮಾಡ್ತಾರಾ ಅನ್ನೋ ಪ್ರಶ್ನೆ ಮೂಡಿದೆ. ಮುಂಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಗೆಲ್ಲಿಸಿ ಎಚ್‍ಡಿಕೆಯವರನ್ನು ಸಿಎಂ ಮಾಡಲು ನಿಖಿಲ್ ಪ್ರಚಾರ ನಡೆಸುತ್ತಾರಂತೆ. ಅಸೆಂಬ್ಲಿ ಚುನಾವಣೆಗೆ ಸ್ಪರ್ಧಿಸುವುದನ್ನು ಕೈಬಿಟ್ಟು ತಂದೆ ಪರ ನಿಖಿಲ್ ಪ್ರಚಾರಕ್ಕಿಳಿಯಲಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ‘ಅಣ್ಣಾ(ಎಚ್‍ಡಿಕೆ) ಈ ಬಾರಿ ಮುಖ್ಯಮಂತ್ರಿಯಾಗಬೇಕು.. ಅದೇ ನಮ್ಮ ಗುರಿ’ ಎಂದು … Read more