ಕಾಂಗ್ರೆಸ್​ನ ‘ರಾಹು’ ಕಾಲದಲ್ಲಿ ಅಧಿಕಾರಕ್ಕಾಗಿ ಬರೇ ಕಿತ್ತಾಟ!: ಬಿಜೆಪಿ ಟೀಕೆ

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವಿನ ಅಸಹನೆಗೆ ಬೆಂಕಿ ಬಿದ್ದಿದೆ, ನಿಜ ಬಣ್ಣ ಬಯಲಾಗುತ್ತಿದೆ ಎಂದು ಬಿಜೆಪಿ ಟೀಕಿಡಿದೆ. #SidduVsDKS ಹ್ಯಾಶ್ ಟ್ಯಾಗ್ ಬಳಸಿ ಶನಿವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಕಾಂಗ್ರಸ್ ನಾಯಕ ರಾಹುಲ್ ಗಾಂಧಿ ಮುಂದೆ ಮಾಡಿದ ಎಲ್ಲಾ ನಾಟಕಗಳ ಮುಖವಾಡ ಕಳಚಿದೆ. ರಾಹುಲ್‌ ಗಾಂಧಿ ನಿರ್ದೇಶನದಂತೆ ಡಿಕೆಶಿ ಎಲ್ಲರೆದುರು ಸಿದ್ದರಾಮಯ್ಯ ಅವರನ್ನು ಅಪ್ಪಿಕೊಂಡರು. ಆದರೆ, ಒಪ್ಪಿಕೊಂಡಿಲ್ಲ ಎನ್ನುವುದು ಮತ್ತೆ ಸಾಬೀತಾಗಿದೆ. ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವಿನ ಅಸಹನೆಗೆ … Read more

Siddaramosthava: ಸಿದ್ದರಾಮಯ್ಯ ‘ಅಮೃತ ಮಹೋತ್ಸವ’ಕ್ಕೆ ಸಿದ್ಧಗೊಂಡ ಬೃಹತ್ ವೇದಿಕೆ

ದಾವಣಗೆರೆ: ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯರ 75ನೇ ಹುಟ್ಟುಹಬ್ಬದ ಪ್ರಯುಕ್ತ ದಾವಣಗೆರೆಯಲ್ಲಿ ಆಯೋಜಿಸಲಾಗಿರುವ ‘ಸಿದ್ದರಾಮೋತ್ಸವ ಅಮೃತ ಮಹೋತ್ಸವ’ ಕಾರ್ಯಕ್ರಮಕ್ಕೆ ಬೃಹತ್ ವೇದಿಕೆ ಸಿದ್ಧಗೊಂಡಿದೆ. ಬರೋಬ್ಬರಿ 150 ಜನರು ಕುಳಿತುಕೊಳ್ಳಲು ವೇದಿಕೆಯಲ್ಲಿ ವ್ಯವಸ್ಥೆ ಮಾಡಲಾಗಿದೆ. ಸಿದ್ದರಾಮಯ್ಯನವರು ಅಮೃತ ಮಹೋತ್ಸವದ ಕೇಂದ್ರ ಬಿಂದುವಾಗಿದ್ದು, ಎಐಸಿಸಿ ವರಿಷ್ಟ ರಾಹುಲ್ ಗಾಂಧಿ ಸೇರಿ ಕೇಂದ್ರ ಕಾಂಗ್ರೆಸ್‍ನ ಹಲವಾರು ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ವಿವಿಐಪಿ, ವಿಐಪಿ, ಪಕ್ಷದ ನಾಯಕರು, ಮಾಜಿ ಸಚಿವರು, ಪಕ್ಷದ ಮುಖಂಡತು ಮತ್ತು ಸಿದ್ದರಾಮಯ್ಯ ಆಪ್ತರಿಗೆ ವಿಶೇಷ ಆಸನಗಳ ವ್ಯವಸ್ಥೆ … Read more

Siddaramotsava: ‘ಕಾಂಗ್ರೆಸ್ಸಿಗರೇ ಸೂತಕದ ಮನೆಯಲ್ಲಿ ಸಂಭ್ರಮ ಎಷ್ಟು ಸರಿ!?’

ಬೆಂಗಳೂರು: ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯನವರ 75ನೇ ಹುಟ್ಟುಹಬ್ಬದ ಪ್ರಯುಕ್ತ ದಾವಣಗೆರೆಯಲ್ಲಿ ಆಯೋಜಿಸಿರುವ ‘ಸಿದ್ದರಾಮೋತ್ಸವ ಅಮೃತ ಮಹೋತ್ಸವ’ ಕಾರ್ಯಕ್ರಮವನ್ನು ಟೀಕಿಸಿರುವ ಬಿಜೆಪಿ, ‘ಕಾಂಗ್ರೆಸ್ಸಿಗರೇ ಸೂತಕದ ಮನೆಯಲ್ಲಿ ಸಂಭ್ರಮದ ವಾತಾವರಣ ಎಷ್ಟು ಸರಿ!?’ ಎಂದು ಪ್ರಶ್ನಿಸಿದೆ. #ಜನವಿರೋಧಿಕಾಂಗ್ರೆಸ್ ಹ್ಯಾಶ್ ಟ್ಯಾಗ್ ಬಳಸಿ ಬುಧವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಸಿದ್ದರಾಮಯ್ಯ ಅಮೃತ ಮಹೋತ್ಸವ ಮತ್ತು ಕರ್ನಾಟಕ. ರಾಜ್ಯದಲ್ಲಿ ಮೂವರು ಹತ್ಯೆಗೀಡಾಗಿದ್ದಾರೆ, ಕಳೆದೆರೆಡು ದಿನಗಳಲ್ಲಿ 11 ಸಾವು ಸಂಭವಿಸಿದೆ ಮತ್ತು ಕಾಂಗ್ರೆಸ್ ಕಾರ್ಯಕರ್ತನೊಬ್ಬ ಅಪಘಾತದಲ್ಲಿ ಸಾವನ್ನಪ್ಪಿದ್ದಾನೆ. ಕಾಂಗ್ರೆಸ್ಸಿಗರೇ ಸೂತಕದ … Read more

ಡಿಕೆಶಿ ಭವಿಷ್ಯ ಇಂದು ನಿರ್ಧಾರ: ಇಡಿ ಪ್ರಕರಣದಲ್ಲಿ ಸಿಗುತ್ತಾ ಬೇಲ್‌?

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ಇತರೆ ಆರೋಪಿಗಳು ಭವಿಷ್ಯ ಇಂದು ನಿರ್ಧಾರವಾಗಲಿದೆ. ಈ ಹಿಂದೆ ಸಲ್ಲಿಸಿದ್ದ ಜಾಮೀನು ಅರ್ಜಿಯ ತೀರ್ಪು ದೆಹಲಿಯ ರೋಸ್ ಅವೆನ್ಯೂ ಕೋರ್ಟ್‌ನಿಂದ ಇಂದು ಮಧ್ಯಾಹ್ನ ಪ್ರಕಟವಾಗಲಿದೆ. ಇದನ್ನೂ ಓದಿ: ಉಚಿತ ಪಡಿತರ ಪಡೆಯುವವರಿಗೆ ಶಾಕಿಂಗ್ ! ಫ್ರೀ ರೇಶನ್ ನಿಲ್ಲಿಸಲು ಸರ್ಕಾರ ಚಿಂತನೆ ಇನ್ನು ಡಿಕೆಶಿ ಜೊತೆ ಉಳಿದ ನಾಲ್ಕು ಆರೋಪಿಗಳಿಗೂ ಬೇಲ್ ಸಿಗಲಿದೆಯೋ ಇಲ್ಲವೊ ಎಂಬುದು ಇಂದು ಖಚಿತವಾಗಲಿದೆ. ತೀರ್ಪು ಹಿನ್ನಲೆಯಲ್ಲಿ ಡಿ.ಕೆ.ಶಿವಕುಮಾರ್, ಡಿ.ಕೆ.ಸುರೇಶ್, … Read more

ಇದು ಸಿದ್ದರಾಮೋತ್ಸವವಲ್ಲ ಕಾಂಗ್ರೆಸ್ ಅಂತ್ಯೋತ್ಸವ: ಬಿಜೆಪಿ ಟೀಕೆ

ಬೆಂಗಳೂರು: ಹಸಿದವರ ಹೊಟ್ಟೆಗೆ ಅನ್ನದ ಭಾಗ್ಯವಾದೆ ಎಂದು ಸಿದ್ದರಾಮಯ್ಯನವರು ಪತ್ರಿಕೆಗಳಲ್ಲಿ ಜಾಹೀರಾತು ಹಾಕಿಸಿಕೊಂಡಿದ್ದಾರೆ. ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ದುಡ್ಡು ಕೊಟ್ಟಿದ್ದನ್ನು ಮುಚ್ಚಿಟ್ಟು ತನ್ನ ಜೇಬಿನಿಂದ ದುಡ್ಡು‌ ಕೊಟ್ಟಂತೆ ಸಿದ್ದರಾಮಯ್ಯ ಪ್ರಚಾರ ಪಡೆಯುತ್ತಿದ್ದಾರೆ ಎಂದು ಬಿಜೆಪಿ ಟೀಕಿಸಿದೆ. ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯನವರ 75ನೇ ಹುಟ್ಟುಹಬ್ಬದ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಟೀಕಿಸಿರುವ ಬಿಜೆಪಿ, ಇದು ಸಿದ್ದರಾಮೋತ್ಸವವಲ್ಲ ಕಾಂಗ್ರೆಸ್‍ನ ಅಂತ್ಯೋತ್ಸವ ಎಂದು ಕುಟುಕಿದೆ. ‘ನೇಗಿಲ ಯೋಗಿಗೆ ಜಲಭಾಗ್ಯದ ಭಗೀರಥನಂತೆ! ವಿಪಕ್ಷ ನಾಯಕ ಸಿದ್ದರಾಮಯ್ಯನವರೇ ಸುಳ್ಳು ಹೇಳುವುದಕ್ಕೂ ಒಂದು … Read more