ಇದು ಸಿದ್ದರಾಮೋತ್ಸವವಲ್ಲ ಕಾಂಗ್ರೆಸ್ ಅಂತ್ಯೋತ್ಸವ: ಬಿಜೆಪಿ ಟೀಕೆ

ಬೆಂಗಳೂರು: ಹಸಿದವರ ಹೊಟ್ಟೆಗೆ ಅನ್ನದ ಭಾಗ್ಯವಾದೆ ಎಂದು ಸಿದ್ದರಾಮಯ್ಯನವರು ಪತ್ರಿಕೆಗಳಲ್ಲಿ ಜಾಹೀರಾತು ಹಾಕಿಸಿಕೊಂಡಿದ್ದಾರೆ. ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ದುಡ್ಡು ಕೊಟ್ಟಿದ್ದನ್ನು ಮುಚ್ಚಿಟ್ಟು ತನ್ನ ಜೇಬಿನಿಂದ ದುಡ್ಡು‌ ಕೊಟ್ಟಂತೆ ಸಿದ್ದರಾಮಯ್ಯ ಪ್ರಚಾರ ಪಡೆಯುತ್ತಿದ್ದಾರೆ ಎಂದು ಬಿಜೆಪಿ ಟೀಕಿಸಿದೆ. ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯನವರ 75ನೇ ಹುಟ್ಟುಹಬ್ಬದ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಟೀಕಿಸಿರುವ ಬಿಜೆಪಿ, ಇದು ಸಿದ್ದರಾಮೋತ್ಸವವಲ್ಲ ಕಾಂಗ್ರೆಸ್‍ನ ಅಂತ್ಯೋತ್ಸವ ಎಂದು ಕುಟುಕಿದೆ. ‘ನೇಗಿಲ ಯೋಗಿಗೆ ಜಲಭಾಗ್ಯದ ಭಗೀರಥನಂತೆ! ವಿಪಕ್ಷ ನಾಯಕ ಸಿದ್ದರಾಮಯ್ಯನವರೇ ಸುಳ್ಳು ಹೇಳುವುದಕ್ಕೂ ಒಂದು … Read more

ಒಂದೆಡೆ ‘ಜನತಾ ಜಲಧಾರೆ’ ಮತ್ತೊಂದೆಡೆ ಕಣ್ಣೀರಧಾರೆ: ಬಿಜೆಪಿ ವ್ಯಂಗ್ಯ

ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿ ಆಯೋಜಿಸಿದ್ದ ಜೆಡಿಎಸ್ ಸಮಾವೇಶದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇಗೇಗೌಡರ ಸ್ಥಿತಿ ಕಂಡು ಎಚ್‍.ಡಿ.ಕುಮಾರಸ್ವಾಮಿ ಮತ್ತು ಎಚ್.ಡಿ.ರೇವಣ್ಣ ಕಣ್ಣೀರು ಹಾಕಿದ್ದರು. ಜೆಡಿಎಸ್ ನಾಯಕರು ಹರಿಸಿರುವ ಕಣ್ಣೀರಧಾರೆಗೆ ಬಿಜೆಪಿ ವ್ಯಂಗ್ಯವಾಡಿದೆ. #ಜೆಡಿಎಸ್‌ಕಣ್ಣೀರೋತ್ಸವ ಹ್ಯಾಶ್ ಟ್ಯಾಗ್ ಬಳಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಶುಭಾಶಯಗಳು. ನಿಮ್ಮ ಜನತಾ ಜಲಧಾರೆ ಕಾರ್ಯಕ್ರಮವನ್ನು ಮೀರಿಸುವ ರೀತಿ ಇನ್ನೊಂದು ಯೋಜನೆ ರೂಪಿಸಿದ್ದೀರಿ. ಜೆಡಿಎಸ್ ಕಣ್ಣೀರಧಾರೆ ಯಶಸ್ವಿಯಾಗಲಿ!’ ಎಂದು ಟೀಕಿಸಿದೆ. ಇದನ್ನೂ ಓದಿ: ʼಕರಾವಳಿಯಲ್ಲಿ ದೊಡ್ಡಮಟ್ಟದ ಕೋಮು … Read more