ಕಾಂಗ್ರೆಸ್​ನ ‘ರಾಹು’ ಕಾಲದಲ್ಲಿ ಅಧಿಕಾರಕ್ಕಾಗಿ ಬರೇ ಕಿತ್ತಾಟ!: ಬಿಜೆಪಿ ಟೀಕೆ

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವಿನ ಅಸಹನೆಗೆ ಬೆಂಕಿ ಬಿದ್ದಿದೆ, ನಿಜ ಬಣ್ಣ ಬಯಲಾಗುತ್ತಿದೆ ಎಂದು ಬಿಜೆಪಿ ಟೀಕಿಡಿದೆ. #SidduVsDKS ಹ್ಯಾಶ್ ಟ್ಯಾಗ್ ಬಳಸಿ ಶನಿವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಕಾಂಗ್ರಸ್ ನಾಯಕ ರಾಹುಲ್ ಗಾಂಧಿ ಮುಂದೆ ಮಾಡಿದ ಎಲ್ಲಾ ನಾಟಕಗಳ ಮುಖವಾಡ ಕಳಚಿದೆ. ರಾಹುಲ್‌ ಗಾಂಧಿ ನಿರ್ದೇಶನದಂತೆ ಡಿಕೆಶಿ ಎಲ್ಲರೆದುರು ಸಿದ್ದರಾಮಯ್ಯ ಅವರನ್ನು ಅಪ್ಪಿಕೊಂಡರು. ಆದರೆ, ಒಪ್ಪಿಕೊಂಡಿಲ್ಲ ಎನ್ನುವುದು ಮತ್ತೆ ಸಾಬೀತಾಗಿದೆ. ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವಿನ ಅಸಹನೆಗೆ … Read more

Mallikarjun Kharge : ಸೋನಿಯಾ, ರಾಹುಲ್ ನಂತರ ಮಲ್ಲಿಕಾರ್ಜುನ ಖರ್ಗೆಗೆ ಶಾಕ್ ನೀಡಿದೆ ಇಡಿ!

ED Notice Mallikarjun Kharge : ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಈ ಹಿಂದೆ ಇಡಿ ಅಧಿಕಾರಿಗಳು ಶಾಕ್ ನೀಡಿದ್ದರು. ಇದೀಗ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇಡಿ ಸಮನ್ಸ್ ಜಾರಿ ಮಾಡಿದೆ. ಈ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಸಂಸತ್ತಿನ ಅಧಿವೇಶನದ ಮಧ್ಯದಲ್ಲಿ ನನಗೆ ಇಡಿ ನೋಟಿಸ್ ಬಂದಿದೆ. ನಾವು ಯಾವುದಕ್ಕೂ ಹೆದರುವುದಿಲ್ಲ. ಆದರೆ, ದೈರ್ಯದಿಂದ ಹೋರಾಡುತ್ತೇವೆ ಎಂದು ಹೇಳಿದ್ದಾರೆ.  ತಕ್ಷಣವೆ ವಿಚಾರಣೆಗೆ ಬನ್ನಿ … Read more

Siddaramosthava: ಸಿದ್ದರಾಮಯ್ಯ ‘ಅಮೃತ ಮಹೋತ್ಸವ’ಕ್ಕೆ ಸಿದ್ಧಗೊಂಡ ಬೃಹತ್ ವೇದಿಕೆ

ದಾವಣಗೆರೆ: ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯರ 75ನೇ ಹುಟ್ಟುಹಬ್ಬದ ಪ್ರಯುಕ್ತ ದಾವಣಗೆರೆಯಲ್ಲಿ ಆಯೋಜಿಸಲಾಗಿರುವ ‘ಸಿದ್ದರಾಮೋತ್ಸವ ಅಮೃತ ಮಹೋತ್ಸವ’ ಕಾರ್ಯಕ್ರಮಕ್ಕೆ ಬೃಹತ್ ವೇದಿಕೆ ಸಿದ್ಧಗೊಂಡಿದೆ. ಬರೋಬ್ಬರಿ 150 ಜನರು ಕುಳಿತುಕೊಳ್ಳಲು ವೇದಿಕೆಯಲ್ಲಿ ವ್ಯವಸ್ಥೆ ಮಾಡಲಾಗಿದೆ. ಸಿದ್ದರಾಮಯ್ಯನವರು ಅಮೃತ ಮಹೋತ್ಸವದ ಕೇಂದ್ರ ಬಿಂದುವಾಗಿದ್ದು, ಎಐಸಿಸಿ ವರಿಷ್ಟ ರಾಹುಲ್ ಗಾಂಧಿ ಸೇರಿ ಕೇಂದ್ರ ಕಾಂಗ್ರೆಸ್‍ನ ಹಲವಾರು ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ವಿವಿಐಪಿ, ವಿಐಪಿ, ಪಕ್ಷದ ನಾಯಕರು, ಮಾಜಿ ಸಚಿವರು, ಪಕ್ಷದ ಮುಖಂಡತು ಮತ್ತು ಸಿದ್ದರಾಮಯ್ಯ ಆಪ್ತರಿಗೆ ವಿಶೇಷ ಆಸನಗಳ ವ್ಯವಸ್ಥೆ … Read more

ಹುಬ್ಬಳ್ಳಿಯಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನ ಮಹತ್ವದ ಸಭೆ

ಹುಬ್ಬಳ್ಳಿ: ಸಿದ್ಧರಾಮೋತ್ಸವ ಕಾರ್ಯಕ್ರದಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ರಾಜ್ಯಕ್ಕೆ ಭೇಟಿ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ರಾತ್ರಿ ರಾಜ್ಯದ ಹಿರಿಯ ಕಾಂಗ್ರೆಸ್ ನಾಯಕರ ಜೊತೆ ಮಹತ್ವದ ಸಭೆಯನ್ನು ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ‘ರಾಜಕೀಯ ವ್ಯವಹಾರಗಳ ಸಮಿತಿ’ ಸಭೆಯಲ್ಲಿ ಕಾಂಗ್ರೆಸ್‌‌ ರಾಷ್ಟ್ರೀಯ ನಾಯಕರಾದ @RahulGandhi, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ @kcvenugopalmp ಕೆಪಿಸಿಸಿ ಅಧ್ಯಕ್ಷರಾದ @DKShivakumar, ವಿಧಾನಸಭೆ ವಿಪಕ್ಷ ನಾಯಕರಾದ @siddaramaiah, ವಿಧಾನ ಪರಿಷತ್ ವಿಪಕ್ಷ ನಾಯಕರಾದ @HariprasadBK2 ಉಪಸ್ಥಿತರಿದ್ದರು. pic.twitter.com/OGpYcSQd2k — Karnataka Congress (@INCKarnataka) August … Read more

Siddaramotsava: ‘ಕಾಂಗ್ರೆಸ್ಸಿಗರೇ ಸೂತಕದ ಮನೆಯಲ್ಲಿ ಸಂಭ್ರಮ ಎಷ್ಟು ಸರಿ!?’

ಬೆಂಗಳೂರು: ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯನವರ 75ನೇ ಹುಟ್ಟುಹಬ್ಬದ ಪ್ರಯುಕ್ತ ದಾವಣಗೆರೆಯಲ್ಲಿ ಆಯೋಜಿಸಿರುವ ‘ಸಿದ್ದರಾಮೋತ್ಸವ ಅಮೃತ ಮಹೋತ್ಸವ’ ಕಾರ್ಯಕ್ರಮವನ್ನು ಟೀಕಿಸಿರುವ ಬಿಜೆಪಿ, ‘ಕಾಂಗ್ರೆಸ್ಸಿಗರೇ ಸೂತಕದ ಮನೆಯಲ್ಲಿ ಸಂಭ್ರಮದ ವಾತಾವರಣ ಎಷ್ಟು ಸರಿ!?’ ಎಂದು ಪ್ರಶ್ನಿಸಿದೆ. #ಜನವಿರೋಧಿಕಾಂಗ್ರೆಸ್ ಹ್ಯಾಶ್ ಟ್ಯಾಗ್ ಬಳಸಿ ಬುಧವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಸಿದ್ದರಾಮಯ್ಯ ಅಮೃತ ಮಹೋತ್ಸವ ಮತ್ತು ಕರ್ನಾಟಕ. ರಾಜ್ಯದಲ್ಲಿ ಮೂವರು ಹತ್ಯೆಗೀಡಾಗಿದ್ದಾರೆ, ಕಳೆದೆರೆಡು ದಿನಗಳಲ್ಲಿ 11 ಸಾವು ಸಂಭವಿಸಿದೆ ಮತ್ತು ಕಾಂಗ್ರೆಸ್ ಕಾರ್ಯಕರ್ತನೊಬ್ಬ ಅಪಘಾತದಲ್ಲಿ ಸಾವನ್ನಪ್ಪಿದ್ದಾನೆ. ಕಾಂಗ್ರೆಸ್ಸಿಗರೇ ಸೂತಕದ … Read more